ಕೊಪ್ಪಳ : ಮಧ್ಯಮ ವರ್ಗವು ಆರ್ಥಿಕವಾಗಿ ಬೆಳೆಯುತ್ತಿರುವ ಭಾರತಕ್ಕೆ ಈ ಬಜೆಟ್ ಆರ್ಥಿಕತೆಗೆ ಬಹಳ ಪೂರಕವಾಗಿದೆ. ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ.ವಿ ಚಂದ್ರಶೇಖರ್ ಹೇಳಿದ್ದಾರೆ.
ಇಂದು ಮಂಡನೆಯಾದ ಬಜೆಟ್ ನಿಂದ ಮಧ್ಯಮ ವರ್ಗದವರನ್ನು ಗಮನದಲ್ಲಿ ಇರಿಸಿಕೊಂಡು ಘೋಷಣೆ ಮಾಡಿದ ಬಜೆಟ್ ಆಗಿದೆ. ಇದು ಮದ್ಯಮ ವರ್ಗದ ಹಣಕಾಸು ಶಕ್ತಿಯನ್ನು ಹೆಚ್ಚಿಸುತ್ತದೆ. ಸುಮಾರು ೧೨ ಲಕ್ಷದವರೆಗೆ ತೆರಿಗೆ ವಿನಾಯಿತಿ ನೀಡಿರುವುದು ಗಮನಾರ್ಹ. ಅಭಿವೃದ್ಧಿಯಲ್ಲಿ ಆರ್ಥಿಕ ಹಾಗೂ ಸಾಮಾಜಿಕ ವಲಯದಲ್ಲಿ ಸಮತೋಲನ ಕಾಯ್ದುಕೊಳ್ಳಲಾಗಿದೆ. ಬಡವರು. ರೈತರು, ಮಹಿಳೆಯರು, ಯುವಕರು, ಎಸ್ಸಿ, ಎಸ್ಟಿ ಸಮುದಾಯಗಳಿಗೆ ಆದ್ಯತೆ ನೀಡಲಾಗಿದೆ. ದುಡಿಯುವ ಕೈಗಳಿಗೆ ವಿಪುಲವಾದಂತ ಅವಕಾಶ ಕೊಟ್ಟಿರುವ ಬಜೆಟ್. ತನ್ನದೇ ತಾಂತ್ರಿಕತೆಗೆ ಸಂಶೋಧನೆಗೆ ವಿಶೇಷವಾಗಿ ಕೃಷಿಯನ್ನು ಆತ್ಮ ನಿರ್ಭರ ಮಾಡುವ ಬಜೆಟ್. ಯೂರಿಯಾ ಗೊಬ್ಬರ, ಬೀಜ, ಉತ್ಪಾದನೆಯಲ್ಲಿ ನಾವು ಸಂಪೂರ್ಣವಾಗಿ ಆತ್ಮನಿರ್ಭರವಾಗಲು ಅವಕಾಶ ನೀಡಲಾಗಿದೆ. ಹಳ್ಳಿಗಾಡಿನಲ್ಲಿ ಸ್ವಯಂ ಉದ್ಯೋಗವಕಾಶ, ಹಳ್ಳಿಗಳಿಂದ ಶಹರಕ್ಕೆ ಹೋಗುವುದನ್ನು ತಡೆಯಲಯ ಕ್ರಮ. ರೈಲ್ವೆ, ರಸ್ತೆ ನಿರ್ಮಾಣಕ್ಕೆ ಹೆಚ್ಚಿನ ಬಂಡವಾಳ ಹರಿದು ಬರುತ್ತಿದೆ. ಆರೋಗ್ಯ ಮತ್ತು ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ. ಆರೋಗ್ಯ ವಲಯದಲ್ಲಿ ಕ್ಯಾನ್ಸರ್ ನಿಯಂತಣಕ್ಕೆ ಹೆಚ್ಚಿನ ಆದ್ಯತೆ ನೀಡಿರುವುದು ವಿಶೇಷ ಎಂದರು. “ಡಿಜಿಟಲ್ ಮೂಲ ಸೌಕರ್ಯಗಳಿಗೆ, ಗ್ರಾಹಕರಿಂದ ಖರೀದಿ ಖರ್ಚುಗಳಿಗೆ ಒಟ್ಟಾರೆ ಚಿಲ್ಲರೆ ವ್ಯಾಪಾರದ ಪರಿಸರ ವ್ಯವಸ್ಥೆಗೆ ಬಲವಾದ ಉತ್ತೇಜನ ನೀಡಲಿದೆ. ಭಾರತ್ ನೆಟ್ ಅಡಿಯಲ್ಲಿ ೫ಉ ತರಂಗಾAತರದ ನಿರಂತರ ವಿಸ್ಯರಣೆಗೆ ಒತ್ತು ಮತ್ತು ಡಿಜಿಟಲ್ ಮೂಲಸೌಕರ್ಯ ಸಂಪರ್ಕ ಸಾಧ್ಯತೆಗಳನ್ನು ಹೆಚ್ಚಿಸಲಿದ್ದು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸ್ಮಾರ್ಟ್ ಉಪಕರಣಗಳ ಅಳವಡಿಕೆಗೆ ಚಾಲನೆ ನೀಡಲಿದೆ,” ಎಂದು ಹೇಳಿದ್ದಾರೆ.
ಬಹುತೇಕ ಮದ್ಯಮ ವರ್ಗವನ್ನು ಹೊಂದಿರುವ, ಆರ್ಥಿಕವಾಗಿ ಮುನ್ನುಗ್ಗುತ್ತಿರವ ಭಾರತಕ್ಕೆ ಈ ಬಜೆಟ್ನಿಂದ ಬಹಳ ಅನಕೂಲವಾಗಲಿದೆ. ಮದ್ಯಮ ವರ್ಗ ಮುಂದೆ ಬರಲಿದೆ ಎಂದರು.
ಆರ್ಥಿಕತೆಗೆ ಪೂರಕವಾದ ಬಜೆಟ್ : ಸಿ.ವಿ. ಚಂದ್ರಶೇಖರ್
