ಕೊಪ್ಪಳ : ಜಿಲ್ಲೆಯ ಕುಷ್ಟಗಿಯಲ್ಲಿ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಜೊತೆ ಮಹಿಳಾ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿತ್ತು, ಆದರೆ ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ರದ್ದಾಗಿದೆ ಎಂಬ ತಿಳಿದು ಬಂದಿದೆ. ಈ ಕಾರ್ಯಕ್ರಮ ರದ್ದಾಗುವುದಕ್ಕೆ ಪ್ರಮುಖ ಕಾರಣವೇಂದರೆ, ಹವಾಮಾನ ವೈಪರೀತ್ಯ ಹಿನ್ನೆಲೆ ರಾಹುಲ್ ಗಾಂಧಿ ಕುಷ್ಟಗಿಗೆ ಆಗಮಿಸಲು ಆಗಲಿಲ್ಲ, ಈ ಹಿನ್ನೆಲೆ ಕಾರ್ಯಕ್ರಮ ರದ್ದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಕೊಪ್ಪಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಮಹಿಳಾ ಸಂವಾದದಲ್ಲಿ ಸಾವಿರಾರು ಮಹಿಳೆಯರು ಭಾಗವಹಿಸಿದ್ದು, ರಾಹುಲ್ ಗಾಂಧಿ ಬಾರದೇ ಹಿನ್ನೆಲೆ ಮಹಿಳೆಯರಿಗೆ ಭಾರೀ ನಿರಾಸೆ ಮೂಡಿಸಿದೆ.