ಯಲಬುರ್ಗಾ: ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಸೋಮವಾರ 2023-24ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮಕ್ಕೆ ಯಲಬುರ್ಗಾ ಕ್ಷೇತ್ರದ ನೂತನ ಶಾಸಕರಾದ ಬಸವರಾಜ ರಾಯರಡ್ಡಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆ ಅಧಿಕಾರಿ ಪ್ರಾಣೇಶ ಹಾದಿಮನಿ,ತಹಶೀಲ್ದಾರ್ ವಿಠ್ಠಲ ಚೌಗಲೆ, ಹಾಗೂ ಪ್ರಮುಖರಾದ ಬಸವರಾಜ ಉಳ್ಳಾಗಡ್ಡಿ, ಈಶ್ವರ ಆಟಮಾಳಗಿ ಹಾಗೂ ಇತರರಿದ್ದರು.
ಈ ಸಂದರ್ಭದಲ್ಲಿ ಸಾಂಕೇತಿಕವಾಗಿ ರೈತರಿಗೆ ಬೀಜ ವಿತರಣೆಯನ್ನು ಮಾಡಲಾಯಿತು.