BIG BREAKING : ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ..!!

You are currently viewing BIG BREAKING : ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ..!!

ದಕ್ಷಿಣ ಕನ್ನಡ : ರಾಜ್ಯದಲ್ಲಿ ಆನ್‌ಲೈನ್ ಗೇಮ್‌ ಮತ್ತು ಲೋನ್‌ ಆಪ್ಯ್‌ ಬ್ಯಾನ್‌ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಇಂದು ದಕ್ಷಿಣ ಕನ್ನಡದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಹಲವು ರಾಜ್ಯಗಳಲ್ಲಿ ಈಗಾಗಲೇ ಆನ್‌ಲೈನ್ ಗೇಮ್‌ ಬ್ಯಾನ್‌ ಮಾಡಲಾಗಿದ್ದು, ಈ ನಿಟ್ಟಿನಲ್ಲಿ ನಾವು ಕೂಡ ಚಿಂತನೆ ನಡೆಸಿದ್ದು, ಈ ಬಗ್ಗೆ ಶೀಘ್ರದಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಆನ್‌ಲೈನ್‌ ಗೇಮ್‌ನಿಂದಾಗಿ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದರಿಂದ ಹಲವು ಮಂದಿ ಜನತೆ ಮೋಸಕ್ಕೆ ಹೋಗುತ್ತಿದ್ದಾರೆ. ಹೀಗಾಗಿ ಮುಂದಿನ ದಿನದಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಸೈಬರ್‌ ಕ್ರೈಮ್‌ಗೆ ಕಡಿವಾಣ ಹಾಕುವುದಕ್ಕೆ ಪೋಲಿಸರಿಗೆ ಸೂಚನೆ ನೀಡಲಾಗಿದೆ. ಇನ್ನೂ ಮಂಗಳೂರಿನಲ್ಲಿ ನಡೆಯುತ್ತಿರುವ ಕೋಮುವಾದ ಗಲಾಟೆಗಳಿಗೆ, ನೈತಿಕ ಪೋಲಿಸ್‌ ಗಿರಿಗೆ ಕಡಿವಾಣ ಹಾಕಲೇ ಬೇಕು ಎಂದು ಅವರು ಪೋಲಿಸರಿಗೆ ಸೂಚನೆ ನೀಡಿದರು.

Leave a Reply

error: Content is protected !!