Political Round : ಟಿಕೆಟ್ ಪಕ್ಕಾ ಮಾಡಿಕೊಳ್ಳಲು ದೆಹಲಿಗೆ ಹೋದ್ರಾ ಸಂಸದ ಸಂಗಣ್ಣ ಕರಡಿ ?

You are currently viewing Political Round : ಟಿಕೆಟ್ ಪಕ್ಕಾ ಮಾಡಿಕೊಳ್ಳಲು ದೆಹಲಿಗೆ ಹೋದ್ರಾ ಸಂಸದ ಸಂಗಣ್ಣ ಕರಡಿ ?

ಕೊಪ್ಪಳ : ಸಂಸದ ಸಂಗಣ್ಣ ಕರಡಿ ಅವರು ಬಿಜೆಪಿ ಪಕ್ಷದ ವರಿಷ್ಟರ ಭೇಟಿಗಾಗಿ ದೆಹಲಿಗೆ ಹೋಗಿದ್ದಾರೆ ಎಂಬ ಮಾಹಿತಿ ಇದ್ದು ಸಂಸದ ಸಂಗಣ್ಣನವರ ದೆಹಲಿ ಭೇಟಿ ಜಿಲ್ಲೆಯಲ್ಲಿ ಕುತೂಹಲ ಹುಟ್ಟಿಸಿದೆ.

ಹೆಚ್ಚಿನ ಸುದ್ದಿಗಾಗಿ ಕ್ಲಿಕ್‌ ಮಾಡಿ….👉 BIG NEWS : ಇಂದಿನಿಂದಲೇ ಮಾಸ್ಕ್ ಕಡ್ಡಾಯ : ದಿನೇಶ್ ಗುಂಡೂರಾವ್ 

ಬಲ್ಲ ಮೂಲಗಳ ಪ್ರಕಾರ ಇಂದು ಸೋಮವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸಂಸದರು ದೆಹಲಿಗೆ ಹೋಗಿದ್ದಾರೆ ಎಂದು ತಿಳಿದುಬಂದಿದ್ದು ದೆಹಲಿ ಭೇಟಿಯ ಕಾರಣ ಮಾತ್ರ ಸ್ಪಷ್ಟವಾಗಿಲ್ಲ. ಅದರೆ ತೀವ್ರ ಕುತೂಹಲವಂತೂ ಹುಟ್ಟಿದೆ.

ಹೆಚ್ಚಿನ ಸುದ್ದಿಗಾಗಿ ಕ್ಲಿಕ್‌ ಮಾಡಿ….👉  “ಉಚಿತ ಹೊಲಿಗೆ (ಟೈಲರಿಂಗ್) ತರಬೇತಿ ಪಡೆದ ಮಹಿಳೆಯರಿಗೆ ಪ್ರಮಾಣ ಪತ್ರ ವಿತರಣೆ”

ಇನ್ನೂ ತೀವ್ರ ಕುತೂಹಲ ಸಂಗತಿ ಎಂದರೆ ಸಂಸದ ಸಂಗಣ್ಣ ಕರಡಿ ಒಬ್ಬರೇ ಮಾತ್ರವಲ್ಲ , ಬದಲಾಗಿ ಹಿಂದೂ ಫೈರ್ ಬ್ಯಾಂಡ್ ಬಸನಗೌಡ ಪಾಟೀಲ್ ಯತ್ನಾಳ್, ಅನಂತ್ ಕುಮಾರ್ ಹೆಗಡೆ ಅವರೊಂದಿಗೆ ದೆಹಲಿ ಫ್ಲೈಟ್ ಏರಿದ್ದಾರೆ ಎನ್ನಲಾಗಿದೆ. ಕೊಪ್ಪಳ ಸಂಸದರ ದೆಹಲಿ ಭೇಟಿಯ ಲೆಕ್ಕಾಚಾರವೇನು ಎಂದು ನೋಡುವುದಾದರೆ 2024 ರ ಲೋಕಸಭೆ ಟಿಕೆಟ್ ಪಕ್ಕಾ ಮಾಡಿಕೊಳ್ಳುವುದು.

ಹೆಚ್ಚಿನ ಸುದ್ದಿಗಾಗಿ ಕ್ಲಿಕ್‌ ಮಾಡಿ….👉 LOCAL NEWS : ಪ್ರತಿಭೆಗಳಿಗೆ ಪುರಸ್ಕಾರ ಸಿಗಲಿ : ಬಿ.ಇ.ಒ ನಿಂಗಪ್ಪ

ಬಿಜೆಪಿ ಪಕ್ಷದ ಟಿಕೆಟ್ ತಮಗೆ ಸಿಗುವ ಬಗ್ಗೆ ಖಾತರಿ ಪಡಿಸಿಕೊಳ್ಳುವ ಉದ್ದೇಶದಿಂದ ಸಂಸದರು ದೆಹಲಿಗೆ ಹೋಗಿದ್ದಾರೆ ಎನ್ನಲಾಗಿದ್ದು ಮುಂದಿನ ಬೆಳವಣಿಗೆ ಕಾದು ನೋಡಬೇಕಿದೆ.

-:ಪ್ರಜಾವೀಕ್ಷಣೆ ಸುದ್ದಿ ಜಾಲ:-

Leave a Reply

error: Content is protected !!