ಕೊಪ್ಪಳದ ಕೇಂದ್ರಿಯ ಬಸ್ ನಿಲ್ದಾಣದ, ಎದರಿನ ರೈಲ್ವೇ ನಿಲ್ದಾಣದ ರಸ್ತೆಗೆ ಹೊಂದಿಕೊAಡಿರುವ ಪೆಂಟ್ಸ್ ಹಾಗೂ ಇತರೆ ಅಂಗಡಿಗಳಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಆಕಸ್ಮಿಕವಾಗಿ ಸಂಭವಿಸಿದ ಅಗ್ನಿ ಅವಘಡ ಭಾರಿ ಪ್ರಮಾಣದಲ್ಲಿ ಹೊತ್ತಿ ಉರಿತ್ತದೆ. ಸ್ಥಳಕ್ಕೆ ಅಗ್ನಿ ಶಾಮಕ ದಳದವರು ಆಗಮಿಸಿದ್ದು ಬೆಂಕಿಯನ್ನು ನಂದಿಸುವಲ್ಲಿ ಹರ ಸಾಹಸವನ್ನು ಪಡುತ್ತಿದ್ದಾರೆ. ಅಗ್ನಿ ಅವಘಡಕ್ಕೆ ಒಳಗಾದ ಅಂಗಡಿ ಮಾಲಿಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಯಶೋಧ ವಂಟಿಗೋಡಿ ಭೇಟಿ ನೀಡಿದ್ದಾರೆ. ಅಗ್ನಿ ಅವಘಡಕ್ಕೆ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ.