ಮೈಸೂರು : ಸಿದ್ದರಾಮಯ್ಯ ಗೆಲ್ಲಿಸಲು ಬಿಜೆಪಿ ಅನುಕೂಲವಾದ ವಾತವರಣ ಮಾಡಿಕೊಡುತ್ತಿದೆ. ಬಿಜೆಪಿ-ಕಾಂಗ್ರೆಸ್ ನಡುವೆ ಒಳ ಒಪ್ಪಂದ ನಡೆಯುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ಇಂದು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಮಾತನಾಡಿದ ಅವರು, ‘ಸಿದ್ದರಾಮಯ್ಯ ಗೆಲ್ಲಿಸಲು ಬಿಜೆಪಿ ಅನುಕೂಲ ಮಾಡಿಕೊಡುತ್ತಿದೆ, ವರುಣಾ ಕ್ಷೇತ್ರದಲ್ಲಿ ಬಿಜೆಪಿಯವರು ಸರಿಯಾದ ಅಭ್ಯರ್ಥಿ ಹಾಕುತ್ತಿಲ್ಲ, ಜೆಡಿಎಸ್ ಬಿಜೆಪಿ ಒಳ ಒಪ್ಪಂಡ ಮಾಡಿಕೊಂಡಿಲ್ಲ ಎಂದು ಹೇಳಿದರು.
ವರುಣಾ ಕ್ಷೇತ್ರದಲ್ಲಿ ಈ ಬಿಜೆಪಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತಿಲ್ಲ. ಜೆಡಿಎಸ್-ಬಿಜೆಪಿ ಒಳ ಒಪ್ಪಂಡ ಮಾಡಿಕೊಂಡಿಲ್ಲ ಕಾಂಗ್ರೆಸ್-ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದೆ. ರಾಜ್ಯದಲ್ಲಿ ಜೆಡಿಎಸ್ ಪಕ್ಷ 124 ಸ್ಥಾನ ಗೆಲ್ಲಲು ಹೋರಾಟ ನಡೆಸುತ್ತಿದೆ ಎಂದು ಜೆಡಿಎಸ್ ಪಕ್ಷ ಶಾಸಕಾಂಗ ಪಕ್ಷದ ನಾಯಕ ಹೆಚ್ಡಿ ಕುಮಾರಸ್ವಾಮಿ ಹೇಳಿದರು.