ಕುಕನೂರ: ತಾಲೂಕಿನ ಶಿರೂರು ಗ್ರಾಮದಲ್ಲಿ ಶನಿವಾರ ವಿದ್ಯುತ್ ಸ್ಪರ್ಶದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತ ವ್ಯಕ್ತಿಯು ಕುಕನೂರು ತಾಲೂಕಿನ ವೀರಾಪುರ ಗ್ರಾಮದವರಾಗಿದ್ದು 28 ವರ್ಷದ ಲಕ್ಷ್ಮಣ ರಾಮಪ್ಪ ಪೂಜಾರ ಎಂದು ತಿಳಿದು ಬಂದಿದೆ.
ಮೃತ ವ್ಯಕ್ತಿಯು ಶಿರೂರು ಗ್ರಾಮದಲ್ಲಿ ಮನೆ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶದಿಂದ ಸಾವನ್ನೊಪ್ಪಿದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಕುಕನೂರು ಪೊಲೀಸ್ ಠಾಣೆಯಲ್ಲಿ ಮೃತನ ಸೋದರ ದೂರು ದಾಖಲು ಮಾಡಿದ್ದಾರೆ ಎಂದು ತಿಳಿದು ಬಂದಿದೆ.